ಕೆಲವು ಅಭಿಮಾನಿಗಳು ಚಾಮರಾಜನಗರದಿಂದ ಮೈಸೂರಿಗೆ ತೆರಳಿ ಅಲ್ಲಿನ ನಿವಾಸದಲ್ಲಿ ಶ್ರೀನಿವಾಸ್ಪ್ರಸಾದ್ ಅವರನ್ನು ಭೇಟಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಲು ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರಕ್ಕೆ ಪ್ರಸಾದ್ ಅವರು ಸೂಕ್ತ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ನೀಡಲು ಅವರಿಂದ ಮಾತ್ರ ಸಾಧ್ಯ. ಅವರು ಕಳೆದ ಹಲವು ದಶಕಗಳಿಂದ ಸಂಸದರಾಗಿ ಹಾಗೂ ರಾಜ್ಯ ಸಚಿವರಾಗಿ ಸುದೀರ್ಘ ಸೇವೆ ಸಲ್ಲಿಸಿದ್ದಾರೆ.