ಇದೇ ವೇಳೆ ಅಂಬರೀಷ್ ಅವರ ವಿಚಾರ ಪ್ರಸ್ತಾಪಿಸಿದ ಸಿಎಂ, "ನನ್ನ-ಅಂಬರೀಶ್ ಪ್ರೀತಿ ಬಗ್ಗೆ ನಿಮಗೇನು ಗೊತ್ತಿದೆ? ಅವರ ತಮ್ಮನಾಗಿ ಅಂದು ನಿಮ್ಮ ಜತೆ ಬೆರೆತಿದ್ದೆ. ಅಂದು ರಕ್ಷಣಾ ಸಚಿವರಿಗೆ ಮನವಿ ಮಾಡಿ ಮಂಡ್ಯಕ್ಕೆ ಪಾರ್ಥಿವ ಶರೀರ ತರಲು ಪ್ರಯತ್ನಿಸಿದ್ದೆ. ಈಗ ಅಂಬರೀಶ್ ಆತ್ಮ ಏನು ಹೇಳುತ್ತದೆ ಯೋಚಿಸಿ? ಆದರೆ ಅಂಬಿ ಅಭಿಮಾನಿಗಳು ನಮ್ಮ ಬಗ್ಗೆ ಅವಹೇಳನ ಮಾಡುತ್ತಿದ್ದಾರೆ. ನನಗೆ ನಿಖಿಲ್ ಬೇರೆಯಲ್ಲ, ಅಂಬರೀಷ್ ಮಗ ಬೇರೆಯಲ್ಲ. ಅಂಬರೀಷ್ ನಿಧನದ ಸುದ್ದಿ ನನಗೆ ಮೊದಲು ನೀಡಿದ್ದೇ ನಿಖಿಲ್ ಎಂದರು.