ಮಂಡ್ಯ: ನಿನ್ನೆಯಷ್ಟೇ ದೋಸ್ತಿಗಳ ನಡುವೆ 20-8 ಮಾದರಿಯಲ್ಲಿ ಸೀಟು ಹಂಚಿಕೆ ಫೈನಲ್ ಆಗಿದೆ, ಈ ನಡುವೆ ಭಾರೀ ನಿರೀಕ್ಷೆಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಜೆಡಿಎಸ್ ಗೆ ಬಿಟ್ಟುಕೊಟ್ಟಿತ್ತು. ಇಂದು ಮಂಡ್ಯದಲ್ಲಿ ಜೆಡಿಎಸ್ ನ ಬೃಹತ್ ಸಾರ್ವಜನಿಕ ಸಮಾರಂಭದಲ್ಲಿ ಈ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿಯವರನ್ನು ಅಧಿಕೃತವಾಗಿ ಷೋಷಿಸಿದೆ.