ಬೆಂಗಳೂರು:ಮಂಡ್ಯ ಲೋಕಸಭಾ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಇಬ್ಬರ ವಿರುದ್ಧ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಟ್ವೀಟರ್ ಮೂಲಕ ಕಿಡಿಕಾರಿದ್ದಾರೆ.
ಎಸ್ ಎಂ ಕೃಷ್ಣ ಅವರೇ, 50 ವರ್ಷ ಕಾಲ ನೀವು ಅಧಿಕಾರದ ಬೆಣ್ಣೆಯನ್ನು ಸಾಕಷ್ಟು ಮೆಯ್ದಿದೀರಿ. ನಮ್ಮ ಕುಟುಂಬದಲ್ಲಿ ಯಾರೂ ಹಿಂಬಾಗಿಲ ಪ್ರವೇಶ ಪಡೆದಿಲ್ಲ. ಜನ ಆರಿಸಿದಾಗ ಮಾತ್ರ ಅಧಿಕಾರ ಪಡೆದಿದ್ದಾರೆ. ಆದರೆ ನೀವು ರಾಜ್ಯಸಭೆಗೆ ಹಿಂಬಾಗಿಲ ಮೂಲಕ ಪ್ರವೇಶ ಪಡೆಯಲು ದೇವೇಗೌಡರ ಸಹಾಯ ಪಡೆದದ್ದು ನೆನಪಿದೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
Advertisement