ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರ ಹೆಸರನ್ನೇ ಅಂತಿಮ ಮಾಡುತ್ತಿದ್ದೇವೆ.ಮಧು ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
ನನ್ನ ಮೊಮ್ಮಕ್ಕಳ ಗೆಲುವಿಗೆ ಹೋರಾಡಿದಂತೆ ಮಧು ಬಂಗಾರಪ್ಪ ಅವರ ಗೆಲುವಿಗೆ ಹೋರಾಡುತ್ತೇವೆ.ಎಲ್ಲಾ ನಾಯಕರು ಮಧು ಅವರ ಪರ ಪ್ರಚಾರ ಮಾಡುತ್ತಾರೆ ಎಂದು ದೇವೇಗೌಡರು ತಿಳಿಸಿದರು
Advertisement