ಸಮ್ಮಿಶ್ರ ಸರ್ಕಾರದ ಅಂಗಪಕ್ಷಗಳ ನಡುವಿನ ಸೀಟು ಹಂಚಿಕೆ ಒಪ್ಪಂದದಂತೆ ಬೆಂಗಲೂರು ಉತ್ತರ ಲೋಕಸಭೆ ಕ್ಷೇತ್ರ ಜೆಡಿಎಸ್ ಪಾಲಾಗಿದೆ. ಈಗ ಅಲ್ಲಿನ ಜೆಡಿಎಸ್ ಅಭ್ಯರ್ಥಿಗೆ ಕಾಂಗ್ರೆಸ್ ಶಾಅಸಕರು ಬೆಂಬಲಿಸಬೇಕಾಗಿದೆ.ಈ ನಡುವೆ ಬೆಂಗಳೂರು ಉತ್ತರ ಅಥವಾ ತುಮಕೂರಿನಿಂದ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪರ್ಧಿಸುವ ಸಾಧ್ಯತೆ ಇದ್ದು ಕಾಂಗ್ರೆಸ್ ಶಾಸಕರು ತಮ್ಮ ಮೈತ್ರಿ ಪಕ್ಷದ ಪರ ಕೆಲಸ ಮಾಡುವದಕ್ಕೆ ಮುನ್ನ ತಮ್ಮಲ್ಲಿರುವ ಗೊಂದಲ, ಆತಂಕವನ್ನು ಬಗೆಹರಿಸಲು ಮುಖ್ಯಮಂತ್ರಿಗಳಿಗೆ ಒತ್ತಾಯಿಸಬೇಕು ಎಂದು ಕೋರಿದ್ದಾರೆ.