ಬೆಂಗಳೂರು; ಎರಡೂ ಪಕ್ಷಗಳ ನಡುವೆ ಆದ ಒಪ್ಪಂದದ ಪ್ರಕಾರ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದ ಡ್ಯಾನಿಶ್ ಆಲಿ ಮಾಯಾವತಿ ನೇತೃತ್ವದ ಬಿಎಸ್ಪಿ ಪಕ್ಷ ಸೇರಿದ್ದಾರೆ ಎಂದು ಜೆಡಿಎಸ್ ನಾಯಕ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಲಕ್ನೋದಲ್ಲಿ ಮೊನ್ನೆ ಶನಿವಾರ ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಮಿಶ್ರಾ ಸಮ್ಮಖದಲ್ಲಿ ಡ್ಯಾನಿಶ್ ಆಲಿ ಬಿಎಸ್ಪಿ ಸೇರಿದ್ದರು. ಉತ್ತರ ಪ್ರದೇಶದ ಅಮ್ರೊಹ ಕ್ಷೇತ್ರದಿಂದ ಡ್ಯಾನಿಶ್ ಆಲಿ ಬಿಎಸ್ಪಿ ಟಿಕೆಟ್ ನಿಂದ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.