ಶಿವಮೊಗ್ಗ: ಮಲೆನಾಡು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ.
ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ರಾಘವೇಂದ್ರ ಎದುರು ಕಡಿಮೆ ಅಂತರದಲ್ಲಿ ಸೋಲನ್ನುಭವಿಸಿದ ಮಧು ಬಂಗಾರಪ್ಪ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಭಾರೀ ನಿರೀಕ್ಷೆಯನ್ನಿಟ್ಟುಕೊಂಡಿದ್ದು, ಕ್ಷೇತ್ರದಾದ್ಯಂತ ಬಿರುಸಿನ ಪ್ರಚಾರದಲ್ಲಿ ಈಗಾಗಲೇ ನಿರತರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆ ಬಿ.ಎಸ್. ಯಡಿಯೂರಪ್ಪ ಅವರ ಸ್ವಕ್ಷೇತ್ರವಾಗಿದ್ದು, ಪ್ರತಿಷ್ಠೆಯ ಕ್ಷೇತ್ರವಾಗಿದೆ. ಮುಂದಿನ ವಾರ ಶಿಕಾರಿಪುರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಟ್ರಬಲ್ ಶೂಟರ್ ಡಿ. ಕೆ. ಶಿವಕುಮಾರ್ , ಮಧು ಬಂಗಾರಪ್ಪ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ.
Advertisement