ಉಡುಪಿ: ಪ್ರಮೋದ್ ಮದ್ವರಾಜ್ ಪರ ಸಿಎಂ ಕುಮಾರಸ್ವಾಮಿ ಬ್ಯಾಟಿಂಗ್

ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಸಿಎಂ ಕುಮಾರಸ್ವಾಮಿ ಸುಳಿವು ...
ಪ್ರಮೋದ್ ಮಧ್ವರಾಜ್
ಪ್ರಮೋದ್ ಮಧ್ವರಾಜ್
ಶೃಂಗೇರಿ: ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಸಿಎಂ ಕುಮಾರಸ್ವಾಮಿ ಸುಳಿವು ನೀಡಿದ್ದಾರೆ.
ಶೃಂಗೇರಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಪ್ರಮೋದ್ ಮಧ್ವರಾಜ್ ಹೊರಗಿನವರಲ್ಲ, ಅವರು ನಮ್ಮವರೇ, ಈ ಸಂಬಂಧ ಶೀಘ್ರವೇ ಘೋಷಣೆ ಮಾಡುವುದಾಗಿ ಹೇಳಿದ್ದಾರೆ.
ಇನ್ನೂ ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಮೋದ್ ಮಧ್ವರಾಜ್, ಈ ಸಂಬಂಧ ಜೆಡಿಎಸ್ ನಾಯಕರು ಹಾಗೂ ಸಿಎಂ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಮುಖಂಡರು ತಮ್ಮನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.ಆದರೆ ಇನ್ನೂ .ಯಾವುದು ಅಂತಿಮವಾಗಿಲ್ಲ ಎಂದು ತಿಳಿಸಿದ್ದಾರೆ. ಶೀಘ್ರವೇ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದಾರೆ.
ಮೈತ್ರಿ ಸರ್ಕಾರದ ನಿಯಮದಂತೆ ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ ಕಾಂಗ್ರೆಸ್ ಗೆ ಬಿಟ್ಟುಕೊಡಲಾಗಿದೆ, ಹೀಗಾಗಿ ಯಾವುದೇ ಅಭ್ಯರ್ಥಿ ಕಣಕ್ಕಿಳಿದರೂ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳು ಜೊತೆಯಾಗಿಯೇ ಕೆಲಸ ಮಾಡಲಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com