ಮಂಡ್ಯ ಲೋಕಸಮರ: ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಮುಂದೂಡಿಕೆ

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್- ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರ ಇಂದು ಸಲ್ಲಿಕೆಯಾಗಬೇಕಿದ್ದ ನಾಮಪತ್ರ ಸಲ್ಲಿಕೆ ಮುಂದೂಡಿಕೆಯಾಗಿದೆ...
ನಿಖಿಲ್ ಕುಮಾರಸ್ವಾಮಿ
ನಿಖಿಲ್ ಕುಮಾರಸ್ವಾಮಿ
ಮಂಡ್ಯ: ತೀವ್ರ ಕುತೂಹಲಕ್ಕೆ ಕಾರಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್- ಜೆಡಿಎಸ್ ನ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರ ಇಂದು ಸಲ್ಲಿಕೆಯಾಗಬೇಕಿದ್ದ ನಾಮಪತ್ರ ಸಲ್ಲಿಕೆ ಮುಂದೂಡಿಕೆಯಾಗಿದ್ದು, ಮಾರ್ಚ್ 25 ಅಂದರೆ ಸೋಮವಾರ ಅಧಿಕೃತವಾಗಿ ಸಲ್ಲಿಕೆಯಾಗಲಿದೆ. 
ಈ ಮೊದಲು ಸೋಮವಾರವೇ ನಾಮಪತ್ರ ಸಲ್ಲಿಕೆ ಮಾಡುವ ಬಗ್ಗೆ ಯೋಜನೆ ಸಿದ್ದವಾಗಿತ್ತು. ಆದರೆ ನಂತರದ ಬೆಳವಣಿಗೆಯಲ್ಲಿ ಗುರುವಾರ ಮಧ್ಯಾಹ್ನ ಸಾಂಕೇತಿಕವಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಹಿತಿ ಬಂದಿತ್ತು. ಆದರೆ ಈಗ ಈ ಸಾಂಕೇತಿಕ ನಾಮಪತ್ರ ಸಲ್ಲಿಕೆಯನ್ನು ಬಿಟ್ಟು ಸೋಮವಾರವೇ ಅಧಿಕೃತವಾಗಿ ನಾಮಪತ್ರ ಸಲ್ಲಿಕೆಯಾಗಲಿದೆ. 
ಈ ಸಂಬಂಧ ಸ್ಪಷ್ಟನೆ ನೀಡಿರುವ ಮಂಡ್ಯ ಉಸ್ತುವಾರಿ ಸಚಿವ ಪುಟ್ಟರಾಜು, ಸೋಮವಾರದಂದು ಎಲ್ಲಾ ನಾಯಕರ ಸಮ್ಮುಖದಲ್ಲಿ ನಿಖಿಲ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com