ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಐಟಿ ದಾಳಿ- ಕುಮಾರಸ್ವಾಮಿ

ಜೆಡಿಎಸ್, ಕಾಂಗ್ರೆಸ್ ಕಾರ್ಯಕರ್ತರ ಮೇಲಿನ ಆದಾಯ ತೆರಿಗೆ ಇಲಾಖೆ ದಾಳಿ ಮುಂದುವರೆದಿದೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಅಧಿಕಾರ ದುರುಪಯೋಗ ಪಡಿಸಿಕೊಂಡು ಜೆಡಿಎಸ್ - ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ಮುಂದುವರಿಸಿದ್ದು, ಚುನಾವಣಾ ಆಯೋಗ ಮಧ್ಯ ಪ್ರವೇಶಿಸಬೇಕು ಎಂದು  ಮುಖ್ಯಮಂತ್ರಿ ಎಚ್ ಡಿ ಕುಮಾರ ಸ್ವಾಮಿ ಒತ್ತಾಯಿಸಿದ್ದಾರೆ
ಮಂಡ್ಯದ ಜೆಡಿಎಸ್ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಅಕ್ಕಿ ಗಿರಣಿಗಳ ಮೇಲೆ ಬೆಳಗಿನ ಜಾವ 4 ಗಂಟೆ ವರೆಗೆ ದಾಳಿ ಮಾಡಿ ಸ್ಪೈ ಕ್ಯಾಮೆರಾ ಅಳವಡಿಸಿದ್ದಾರೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ರೈಲ್ವೆ ಅಧಿಕಾರಿಗಳ ಸೋಗಿನಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು  ಕಾರು ಕಾರು ಬಾಡಿಗೆ ಪಡೆದಿದ್ದಾರೆ. ಮೈಸೂರಿನ ಸಿಎಫ್ ಟಿಆರ್ ಐ ನಲ್ಲಿ  ಅಧಿಕಾರಿಗಳು ತಂಗಿದ್ದು, ಕಾಂಗ್ರೆಸ್ - ಜೆಡಿಎಸ್ ಕಾರ್ಯಕರ್ತರನ್ನು ಬೆದರಿಸಲು ಈ ತಂತ್ರ ಹೆಣೆದಿದ್ದಾರೆ ಎಂದು ಅವರು ಹೇಳಿದ್ದಾರೆ.
ಕೇಂದ್ರ ಸರ್ಕಾರದ ನೇರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ತಂತ್ರವನ್ನು ಬಲವಾಗಿ ಖಂಡಿಸುವುದಾಗಿ ಹೇಳಿರುವ ಮುಖ್ಯಮಂತ್ರಿ  ಚುನಾವಣಾ ಆಯೋಗ ಕೂಡಲೇ ಮಧ್ಯ ಪ್ರವೇಶಿಸುವ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com