ನಗರದ ಮಿಂಟೋ ಕಣ್ಣಿನ ಆಸ್ಪತ್ರೆಯಲ್ಲಿ ಸಾಮಾನ್ಯ ಪರೀಕ್ಷೆಗೆ ಒಳಪಟ್ಟು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ಪರ ಪ್ರಚಾರ ಮಾಡಲ್ಲ, ತಟಸ್ಥವಾಗಿ ಉಳಿಯುತ್ತೇವೆ ಎಂದಿದ್ದರು. ಈ ಬಗ್ಗೆ ಮಂಡ್ಯದ ನಾಯಕರನ್ನು ಕರೆಸಿ ಮಾತನಾಡುತ್ತೇನೆ. ಚೆಲುವರಾಯಸ್ವಾಮಿ, ನರೇಂದ್ರ ಸ್ವಾಮಿ ಹಾಗೂ ಮಂಡ್ಯ ಮುಖಂಡರಿಂದ ಮಾಹಿತಿ ಪಡೆಯುತ್ತೇನೆ. ಸಭೆ ಮಾಡಿದ್ದಾರೆ ಎಂದಾಕ್ಷಣ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ನೀಡಿದ್ದಾರೆ ಎಂದು ಭಾವಿಸುವುದು ಸರಿಯಲ್ಲ. ಸಭೆ ನಡೆಸಿರುವ ಬಗ್ಗೆಯೂ ತಮಗೆ ಹೆಚ್ಚಿನ ಮಾಹಿತಿಯಿಲ್ಲ ಎಂದು ಅಸಮಾಧಾನಿತ ನಾಯಕರ ನಡೆಯನ್ನು ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.