ಸಚಿವ ಡಿ.ಕೆ.ಶಿವಕುಮಾರ್ ಗೆ ಕುಂದಗೋಳ ಉಸ್ತುವಾರಿ ನೀಡಿದ್ದಕ್ಕೆ ಸತೀಶ್ ಜಾರಕಿಹೊಳಿ ಬೇಸರಗೊಂಡು ಅಸಮಾಧಾನ ಹೊರಹಾಕಿದ್ದರು. ದಕ್ಷಿಣ ಕರ್ನಾಟಕದಲ್ಲಿ ಜೆಡಿಎಸ್ ಪ್ರಾಬಲ್ಯ ಹೆಚ್ಚುತ್ತಿದ್ದು ಅಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲಿ, ಉತ್ತರ ಕರ್ನಾಟಕದಲ್ಲಿ ಅವರ ಪ್ರಾಬಲ್ಯ ವಿಸ್ತರಿಸುವುದು ಬೇಡವೆಂದು ಕುಂದಗೋಳದಲ್ಲಿ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಅಸಮಾಧಾನ ವ್ಯಕ್ತಪಡಿಸಿದ್ದರು.