ಇದೀಗ ಬಸವನಗೌಡ ಪಾಟೀಲ್ ಯತ್ನಾಳ್ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ತಾವೇ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿಯೂ ಲಾಭಿ ಹಾಗೂ ಪೈಪೋಟಿಗೆ ವೇದಿಕೆ ಕಲ್ಪಿಸಿದ್ದಾರೆ. ಯಡಿಯೂರಪ್ಪ ಅವರ ಬಳಿಕ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ , ಸದಾನಂದಗೌಡರು ತಾವು ಮುಂದಿನ ಮುಖ್ಯಮಂತ್ರಿ ಆಕಾಂಕ್ಷಿಗಳೆಂದು ಘೋಷಿಸಿಲ್ಲ. ಆದರೆ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್, ಶೋಭಾ ಕರಂದ್ಲಾಜೆ, ಸಿ.ಟಿ.ರವಿ ಸೇರಿದಂತೆ ಘಟಾನುಘಟಿ ನಾಯಕರು ಮುಖ್ಯಮಂತ್ರಿ ಆಕಾಂಕ್ಷಿಗಳು ಎಂಬುದೇನು ರಹಸ್ಯವಾಗಿ ಉಳಿದಿಲ್ಲ. ಹಾಗೆಂದೂ ಅವರೆಲ್ಲಿಯೂ ತಮ್ಮ ಆಸೆಯನ್ನು ಬಹಿರಂಗವಾಗಿ ವ್ಯಕ್ತಪಡಿಸಿದಂತಿಲ್ಲ.