'ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗೆ ಸಿದ್ದರಾಮಯ್ಯ ಅವರ ಮೇಲೆ ನಂಬಿಕೆ, ವಿಶ್ವಾಸ ಇದೆ. ಹೀಗಾಗಿ ಜನರ ಆಶೀರ್ವಾದದಿಂದ ಮತ್ತೊಮ್ಮೆ ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದಾರೆ. ಇದರಲ್ಲಿ ಯಾವುದೇ ತಪ್ಪು ಕಾಣಿಸುತ್ತಿಲ್ಲ. ಮೈತ್ರಿ ಸರ್ಕಾರವನ್ನು ಅಲುಗಾಡಿಸಬೇಕೆಂಬ ದುರುದ್ದೇಶದಿಂದ ಅವರು ಈ ಮಾತನ್ನು ಹೇಳಿಲ್ಲ, ಮುಂದಿನ ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದು ಮುಖ್ಯಮಂತ್ರಿ ಆಗುವುದಾಗಿ ಹೇಳಿದ್ದಾರೆ. ಇದು ಸರಿಯಾಗಿದೆ. ಇದನ್ನು ಬಹುತೇಕ ಎಲ್ಲಾ ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾರೆ ಎಂದು ಎಂಬಿ ಪಾಟೀಲ್ ಸ್ಪಷ್ಟಪಡಿಸಿದ್ದಾರೆ.