ಕಾಂಗ್ರೆಸ್ ಶಾಸಕರ ಒತ್ತಾಯದ ಬಗ್ಗೆ ಪ್ರತಿಕ್ರಿಯಿಸಿದ ಅವರು,ಪ್ರಸ್ತುತ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಸ್ಥಾನದಲ್ಲಿದ್ದಾರೆ. ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಶಾಸಕರು, ಕೆಲ ನಾಯಕರು ಹೇಳುವುದು ಸರಿಯಲ್ಲ ಎಂದು ಕಾಂಗ್ರೆಸ್ ಶಾಸಕರ ವಿರುದ್ದ ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು. ಜೆಡಿಎಸ್ ಬಿಜೆಪಿಯ ಬಿ ಟೀಂ ಎಂದು ವಿಧಾನ ಸಭೆ ಚುನಾವಣೆಯಲ್ಲಿ ಹೇಳಿದ್ದು ಸಿದ್ದರಾಮಯ್ಯ ಅವರೇ. ಜೆಡಿಎಸ್ಗೆ ವೋಟ್ ಹಾಕಿದರೆ ಅದು ಬಿಜೆಪಿಗೆ ಹಾಕಿದಂತೆ ಎಂದು ಅಪಪ್ರಚಾರ ಮಾಡಿದ್ದರು. ಈ ಹೇಳಿಕೆಯಿಂದಲೇ ಬಿಜೆಪಿ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತು. ಹೀಗಾಗಿ ಬಿಜೆಪಿಗೆ 104 ಸೀಟು ಬರಲು ಸಿದ್ದರಾಮಯ್ಯನವರೇ ನೇರ ಕಾರಣ ಎಂದು ಅವರು ತಿರುಗೇಟು ನೀಡಿದರು.