ಇಂದು ಇಂಗಳಗಿ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಅವರ ಪರ ಪ್ರಚಾರ ನಡೆಸಿದ ಡಿಕೆಶಿ, ಶಿವಳ್ಳಿ ಅವರು ಜಾತಿ ನೋಡದೆ ಎಲ್ಲರ ಸೇವೆ ಮಾಡಿದರು. ಕೊನೆಯವರೆಗೂ ಬಡವರ ಪರ ಕೆಲಸ ಮಾಡಿದರು. ನಿಮ್ಮ ಮುಂದೆ ನಿಂತು ಮತಯಾಚನೆ ಮಾಡುತ್ತಿದ್ದೇನೆ. ಇದು ಶಿವಳ್ಳಿ ಚುನಾವಣೆಯಲ್ಲ. ನಿಮ್ಮ ಚುನಾವಣೆ. ನಿಮ್ಮೆಲ್ಲರ ಪಾದಗಳಿಗೆ ನಮಸ್ಕಾರ ಮಾಡುತ್ತೇನೆ. ಶಿವಳ್ಳಿಯನ್ನು ಉಳಿಸಿಕೊಳ್ಳಿ ಎಂದು ಅಳುತ್ತಲೇ ಹೇಳಿದರು.