ಅಸಮಾಧಾನವಿರುವವರು ಎಲ್ಲಾ ಪಕ್ಷಗಳಲ್ಲಿಯೂ ಇರುತ್ತಾರೆ. ಅಂದ ಮಾತ್ರಕ್ಕೆ ಅಸಮಾಧಾನಿತರನ್ನು ದುಡ್ಡು ಕೊಟ್ಟು ಖರೀದಿಸಲು ಸಾಧ್ಯವೇ? ಕಾಂಗ್ರೆಸ್ನಲ್ಲಿ ಅತೃಪ್ತರು ಯಾರೂ ಇಲ್ಲ. ನಿಜವಾದ ಅತೃಪ್ತರು ಇರುವುದು ಬಿಜೆಪಿಯಲ್ಲಿ. ಉಮೇಶ್ ಜಾಧವ್ ಅವರನ್ನು ಖರೀದಿಸಲು ಬಿಜೆಪಿಗೆ ಹಣ ಎಲ್ಲಿಂದ ಬಂತು? ಬಿಜೆಪಿಯವರಂತೆ ಕಾಂಗ್ರೆಸ್ ಯಾರನ್ನೂ ಹಣಕೊಟ್ಟು ಖರೀದಿಸುವ ಕೆಲಸ ಮಾಡಲಿಲ್ಲ. ಚಿಂಚೋಳಿ, ಕುಂದಗೋಳ ಉಪಚುನಾವಣೆಯಲ್ಲಿ ತಿಪ್ಪರಲಾಗ ಹಾಕಿದರೂ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದರು.