ನಿನ್ನೆ ಕಲಬುರಗಿಯ ಅಫ್ಜಲ್ ಪುರ ತಾಲ್ಲೂಕಿನ ದೇವಳ ಗಾಣಗಾಪುರ ದತ್ತಾತ್ರೇಯ ದೇವಸ್ಥಾನಕ್ಕೆ ಸಿಎಂ ಕುಮಾರಸ್ವಾಮಿ ಪೂಜೆ ಸಲ್ಲಿಸಲು ಹೋಗಿದ್ದರು. ಆಗ ಅರ್ಚಕರೊಬ್ಬರು ಸ್ವತಃ ಕುಮಾರಸ್ವಾಮಿ ಮುಂದೆಯೇ 'ನಿಖಿಲ್ ಎಲ್ಲಿದ್ದೀಯಪ್ಪಾ' ಎಂದು ಬಿಟ್ಟಿದ್ದಾರೆ. ಅವರೊಂದಿಗೆ ಜೆಡಿಎಸ್ ಕಾರ್ಯಕರ್ತರು, ಬೆಂಬಲಿಗರು ದೇವಸ್ಥಾನಕ್ಕೆ ಹೋಗಿದ್ದರು, ದೇವಸ್ಥಾನದಲ್ಲಿ ಪೂಜೆ ಮಾಡುತ್ತಿದ್ದ ಅರ್ಚಕರು ಅಚಾನಕ್ಕಾಗಿ 'ನಿಖಿಲ್ ಎಲ್ಲಿದ್ದೀಯ' ಎಂದು ಕರೆದಿದ್ದಾರೆ, ಇದರಿಂದ ಕೆಲ ಕಾಲ ಅಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.