ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿ, 'ಇದು ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಮಹಾತ್ಮಾ ಗಾಂಧಿ, ರಾಜೀವ್ ಗಾಂಧಿ ಈ ದೇಶಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದವರು. ದೇಶದ ಐಕ್ಯತೆಗಾಗಿ ತ್ಯಾಗ ಮಾಡಿದವರು. ಇಂತಹವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುವ ಜನರ, ಇಂತಹ ವಿಚಾರಧಾರೆಯ ಜನರ ಸಂಖ್ಯೆ ಹೆಚ್ಚಾಗುತ್ತಿರುವುದು ದೇಶಕ್ಕೆ ಆಪತ್ತು, ಅಪಾಯ. ಇನ್ನು ಮೇಲಾದರೂ ನಾಲಗೆಯನ್ನು ಬಿಗಿ ಹಿಡಿದು ಮಾತನಾಡಬೇಕು" ಎಂದು ಅವರು ಎಚ್ಚರಿಕೆ ನೀಡಿದ್ದಾರೆ.