ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇವಿಎಂ ವಿಚಾರವಾಗಿ ಪ್ರತಿಪಕ್ಷಗಳ ನಾಯಕರೊಂದಿಗಿನ ಸಭೆಯಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ದೆಹಲಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಇವಿಎಂ ವಿಚಾರವಾಗಿ ಪ್ರತಿಪಕ್ಷಗಳ ನಾಯಕರೊಂದಿಗಿನ ಸಭೆಯಲ್ಲಿ ಕುಮಾರಸ್ವಾಮಿ ಪಾಲ್ಗೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು
ಈ ಚುನಾವಣೆಯಲ್ಲಿ ಕಾಂಗ್ರೆಸ್ - ಜೆಡಿಎಸ್ ಮೈತ್ರಿಯಲ್ಲಿ ಯಾವುದೇ ವ್ಯತಿರಿಕ್ತ ಫಲಿತಾಂಶ ಬಂದಲ್ಲಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ಮೇಲೆ ಪರಿಣಾಮ ಬೀರಲಿದೆ ಎಂಬ ಉಹಾಪೋಹಗಳು ರಾಜಕೀಯ ಪಡಶಾಲೆಯಲ್ಲಿ ಕೇಳಿಬರುತ್ತಿವೆ.
ಎಚ್. ಡಿ. ಕುಮಾರಸ್ವಾಮಿ ಅವರ ಉದ್ದೇಶಿತ ನವದೆಹಲಿ ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಾರ್ಯಾಲಯ ತಿಳಿಸಿದೆ. ಆದರೆ, ಸ್ಪಷ್ಟ ಕಾರಣವನ್ನು ನೀಡಿಲ್ಲ.