ಬೆಳಗ್ಗೆ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಕೆಪಿಸಿಸಿ ರೋಷನ್ ಬೇಗ್ ಅವರಿಗೆ ಒಂದು ವಾರದಲ್ಲಿ ಉತ್ತರಿಸುವಂತೆ ನೋಟಿಸ್ ಜಾರಿ ಮಾಡಿದೆ. ಈ ಕುರಿತಂತೆ ಟ್ವಿಟರ್ ನಲ್ಲಿ ಮತ್ತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವ ರೋಷನ್ ಬೇಗ್ ಅವರು, ನಾನು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರ ವಿರುದ್ಧ ಮಾತನಾಡುತ್ತಿಲ್ಲ. ಪಕ್ಷದಲ್ಲಿ ನಾನು ಅತ್ಯಂತ ಗೌರವ ಹೊಂದಿರುವ ಸಾಕಷ್ಟು ನಾಯಕರಿದ್ದಾರೆ. ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ, ಎಂಬಿ ಪಾಟೀಲ್, ಕೆಜೆ ಜಾರ್ಜ್ ರಂತಹ ನಾಯಕರು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸ ಮಾಡುತ್ತಿದ್ದಾರೆ. ನನ್ನ ಮಾತು ಇವರಂತಹ ನಾಯಕರ ವಿರುದ್ಧವಲ್ಲ.