ಬೆಂಗಳೂರು ಡೈರಿ ಅಧ್ಯಕ್ಷ ಚುನಾವಣೆ ವಿಚಾರದಲ್ಲಿ ಎಚ್ ಡಿ ರೇವಣ್ಣ ಡಬಲ್ ಗೇಮ್ ಮಾಡುತ್ತಿದ್ದಾರೆ ಎಂದು ಕೈ ಶಾಸಕರು ಆರೋಪ ಮಾಡುತ್ತಿದ್ದಾರೆ, ಏಳು ನಿರ್ದೇಶಕರನ್ನು ಕಾಂಗ್ರೆಸ್ ಹೊಂದಿದ್ದರೂ ಮೂವರು ನಿರ್ದೇಶಕರನ್ನು ಮಾತ್ರ ಹೊಂದಿರುವ ಜೆಡಿಎಸ್, ಚುನಾವಣೆ ಎದುರಿಸುವ ಬದಲು ಮೈತ್ರಿ ಧರ್ಮ ಪಾಲಿಸದೆ ರಾತ್ರೋ ರಾತ್ರಿ ಕಾಂಗ್ರೆಸ್ ಅಭ್ಯರ್ಥಿಯನ್ನೇ ಅನರ್ಹಗೊಳಿಸಿದೆ ಎಂದು ಕಿಡಿ ಕಾರಿದ್ದಾರೆ.