ಸದ್ಯ ಸರ್ಕಾರವನ್ನು ಉಳಿಸಿಕೊಳ್ಳುವುದು, ಬಿಡುವುದರ ಬಗ್ಗೆ ಕಾಂಗ್ರೆಸ್ ನಾಯಕರು ಅಲೋಚನೆ ಮಾಡಬೇಕು, ಮೈತ್ರಿ ಪಕ್ಷಗಳಲ್ಲಿ ಗೊಂದಲ ಸಹಜ, ಅದನ್ನು ನಿವಾರಣೆ ಮಾಡಿಕೊಂಡು ಹೋಗಬೇಕು, ಹಿಂದೆ ಯುಪಿಎ ಅವಧಿಯಲ್ಲಿ ಡಾ. ಮನಮೋಹನ್ ಸಿಂಗ್ ಅವರು 23 ಪಕ್ಷಗಳ ನಾಯಕರನ್ನು ಹೊಂದಾಣಿಕೆ ಮಾಡಿ ಆಡಳಿತ ಮಾಡಿದ್ದರು. ಇಲ್ಲಿ ಕೇವಲ ಎರಡು ಪಕ್ಷಗಳ ನಡುವೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ಕೊಡುವುದಕ್ಕೆ ಇರುವ ಅಡ್ಡಿ ನಿವಾರಣೆ ಮಾಡುವುದು ಬಹಳ ಮುಖ್ಯ ಎಂದು ಅವರು ಹೇಳಿದರು.