ಲೋಕಸಭೆ ಚುನಾವಣೆ ಮತಎಣಿಕೆ: ಪತಿಯನ್ನು ನೆನೆದು ತೇಜಸ್ವಿನಿ ಅನಂತ್ ಕುಮಾರ್ ಟ್ವೀಟ್

2019ರ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ದೇಶದ ಆಡಳಿತ ಚುಕ್ಕಾಣಿ ಹಿಡಿಯೋರು ಯಾರು ಎಂಬುದು ಇಂದು ತಿಳಿಯಲಿದೆ...
ತೇಜಸ್ವಿನಿ ಅನಂತ್ ಕುಮಾರ್
ತೇಜಸ್ವಿನಿ ಅನಂತ್ ಕುಮಾರ್
ಬೆಂಗಳೂರು: 2019ರ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ದೇಶದ ಆಡಳಿತ ಚುಕ್ಕಾಣಿ ಹಿಡಿಯೋರು ಯಾರು ಎಂಬುದು ಇಂದು ತಿಳಿಯಲಿದೆ.
ಇದೇ ವೇಳೆ ಮಾಜಿ ಸಚಿವ ಅನಂತ್​ಕುಮಾರ್ಅವರ ಪತ್ನಿ, ಬಿಜೆಪಿ ನಾಯಕಿ ತೇಜಸ್ವಿನಿ ಅನಂತ್​ ಕುಮಾರ್​ ಅವರು ಟ್ವೀಟ್​ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಗೆಲುವು ಸಾಧಿಸುವುದು ನಿಶ್ಚಿತ ಎಂದಿದ್ದಾರೆ.
ಈ ಕ್ಷೇತ್ರದಲ್ಲಿ ಆರು ಬಾರಿ ಗೆದ್ದು ಸುಶಿಕ್ಷಿತ ಆಡಳಿತ ನಡೆಸಿದ್ದ ತಮ್ಮ ಪತಿ ಅನಂತ್​ ಕುಮಾರ್​ ಅವರನ್ನು ನೆನಪಿಸಿಕೊಂಡ ಅವರು, ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು 1991ರಿಂದ ಪ್ರಾರಂಭವಾಯಿತು. ಅನಂತ್​ಕುಮಾರ್​ ಯಾವುದೇ ಹಗರಣ, ಭ್ರಷ್ಟಾಚಾರವಿಲ್ಲದೆ ಆಡಳಿತ ನಡೆಸಿದ್ದರು ಎಂದು ಟ್ವೀಟ್ ಮಾಡಿದ್ದಾರೆ.
ಹಾಗೇ ಬಿಜೆಪಿ ಪಕ್ಷ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಶುಭ ಹಾರೈಸಿದ್ದಾರೆ. ಬೆಂಗಳೂರು ದಕ್ಷಿಣದ ಟಿಕೆಟ್​ ಈ ಬಾರಿ ತೇಜಸ್ವಿನಿ ಅನಂತ್​ಕುಮಾರ್​ ಅವರ ಪಾಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಅಂತಿಮವಾಗಿ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿತ್ತು, 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com