ಬೆಂಗಳೂರು: 2019ರ ಲೋಕಸಭೆ ಚುನಾವಣೆ ಮತ ಎಣಿಕೆ ಆರಂಭವಾಗಿದೆ. ದೇಶದ ಆಡಳಿತ ಚುಕ್ಕಾಣಿ ಹಿಡಿಯೋರು ಯಾರು ಎಂಬುದು ಇಂದು ತಿಳಿಯಲಿದೆ.
ಇದೇ ವೇಳೆ ಮಾಜಿ ಸಚಿವ ಅನಂತ್ಕುಮಾರ್ಅವರ ಪತ್ನಿ, ಬಿಜೆಪಿ ನಾಯಕಿ ತೇಜಸ್ವಿನಿ ಅನಂತ್ ಕುಮಾರ್ ಅವರು ಟ್ವೀಟ್ ಮಾಡಿದ್ದು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಈ ಬಾರಿ ಗೆಲುವು ಸಾಧಿಸುವುದು ನಿಶ್ಚಿತ ಎಂದಿದ್ದಾರೆ.
ಈ ಕ್ಷೇತ್ರದಲ್ಲಿ ಆರು ಬಾರಿ ಗೆದ್ದು ಸುಶಿಕ್ಷಿತ ಆಡಳಿತ ನಡೆಸಿದ್ದ ತಮ್ಮ ಪತಿ ಅನಂತ್ ಕುಮಾರ್ ಅವರನ್ನು ನೆನಪಿಸಿಕೊಂಡ ಅವರು, ಈ ಕ್ಷೇತ್ರದಲ್ಲಿ ಬಿಜೆಪಿ ಗೆಲುವು 1991ರಿಂದ ಪ್ರಾರಂಭವಾಯಿತು. ಅನಂತ್ಕುಮಾರ್ ಯಾವುದೇ ಹಗರಣ, ಭ್ರಷ್ಟಾಚಾರವಿಲ್ಲದೆ ಆಡಳಿತ ನಡೆಸಿದ್ದರು ಎಂದು ಟ್ವೀಟ್ ಮಾಡಿದ್ದಾರೆ.
ಹಾಗೇ ಬಿಜೆಪಿ ಪಕ್ಷ ಮತ್ತು ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ಶುಭ ಹಾರೈಸಿದ್ದಾರೆ. ಬೆಂಗಳೂರು ದಕ್ಷಿಣದ ಟಿಕೆಟ್ ಈ ಬಾರಿ ತೇಜಸ್ವಿನಿ ಅನಂತ್ಕುಮಾರ್ ಅವರ ಪಾಲಾಗಲಿದೆ ಎಂದು ಹೇಳಲಾಗಿತ್ತು. ಆದರೆ ಅಂತಿಮವಾಗಿ ತೇಜಸ್ವಿ ಸೂರ್ಯ ಅವರಿಗೆ ಬಿಜೆಪಿ ಟಿಕೆಟ್ ಸಿಕ್ಕಿತ್ತು,
Bengaluru South will be going to BJP again. The constituency which opened the BJP account in South India by @AnanthKumar_BJP in 1991 and he held this constituency 6 times with hard work & clean hands since 1996 for @BJP4India. All the best for @Tejasvi_Surya@BJP4Karnataka
— Chowkidar Tejaswini AnanthKumar (@Tej_AnanthKumar) May 23, 2019