ನಿನ್ನೆ ಕೂಡ ಮೈತ್ರಿಕೂಟದಲ್ಲಿ ನಾಯಕರಾದ ಸಿದ್ದರಾಮಯ್ಯ ಮತ್ತು ಎಚ್ ವಿಶ್ವನಾಥ್ ಮಧ್ಯೆ ಮಾತಿನ ಸಮರ ಮುಂದುವರಿದಿತ್ತು. ನಾಳೆ ಅಥವಾ ನಾಡಿದ್ದು ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿಯವರಿಗೆ ಕೊನೆಯ ದಿನ, ಹೊಸ ಸರ್ಕಾರ ರಚನೆಗೆ ವೇದಿಕೆ ಸಿದ್ದವಾಗುತ್ತಿದೆ, ಅದು ಶೇಕಡಾ 100ರಷ್ಟು ಸತ್ಯ ಎಂದು ಬಿಜೆಪಿ ನಾಯಕ ಡಿ ವಿ ಸದಾನಂದ ಗೌಡ ಹೇಳಿದ್ದರು.