ಲೋಕಸಭಾ ಚುನಾವಣಾ ಸಮಯದಲ್ಲಿ ದೇವೇಗೌಡ, ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಸೇರಿದಂತೆ ಮೈತ್ರಿ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತೆಗಳಿದ್ದರು. ಬಿಜೆಪಿಯ ರಾಜ್ಯಾಧ್ಯಕ್ಷರನ್ನು ಕಳ್ಳ, ಸುಳ್ಳ, ಜೈಲಿಗೆ ಹೋಗಿ ಬಂದವರೆಂದು ಟೀಕಿಸಿದ್ದರು. ಮೋದಿ, ಯಡಿಯೂರಪ್ಪ ಅವರನ್ನು ನಿಂದಿಸಿದವರಿಗೆ ಈಗ ಯಾವ ಸ್ಥಿತಿ ಬಂದಿದೆ ಎನ್ನುವುದನ್ನು ಅವರೊಮ್ಮೆ ಅವಲೋಕಿಸಬೇಕು. ಇನ್ನು ಮುಂದಾದರೂ ಯಡಿಯೂರಪ್ಪ ಅವರಿಗೆ ಮೈತ್ರಿ ನಾಯಕರು ಗೌರವ ಕೊಟ್ಟು ಮಾತನಾಡುವುದನ್ನು ಕಲಿಯಲಿ ಎಂದು ಸಲಹೆ ನೀಡಿದರು.