ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೋಟಿಗಟ್ಟಲೆ ಹಣ ಖರ್ಚು ಮಾಡಿದರೂ ಪುತ್ರ ನಿಖಿಲ್ ನನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಅವರು ಹಣ ಖರ್ಚು ಮಾಡಿಯೂ ಯಾವುದೇ ಪ್ರಯೋಜನವಾಗಿಲ್ಲ, ಸುಮಲತಾ ಅಂಬರೀಷ್ ಅವರ ಗೆಲುವು ನಮಗೂ ಹಾಗೂ ಕ್ಷೇತ್ರದ ಜನತೆಗೂ ಸಮಾಧಾನ ತಂದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.