ಎಲೆಕ್ಟ್ರಾನಿಕ್ ಹಾಗೂ ಮುದ್ರಣ ಮಾಧ್ಯಮಗಳಿಗೆ ಪಕ್ಷದ ವಕ್ತಾರರು ಹೇಳಿಕೆ ಕೊಡಬಾರದು ಎಂದು ಪಕ್ಷದ ಕಾರ್ಯಾಧ್ಯಕ್ಷ ಎಂ.ಎಸ್.ನಾರಾಯಣರಾವ್ ಆದೇಶ ಹೊರಡಿಸಿದ್ದಾರೆ. ಶುಕ್ರವಾರ ನಡೆದ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಪಕ್ಷದ ವಕ್ತಾರರು ಮಾಧ್ಯಮಗಳ ಚರ್ಚೆಯಲ್ಲಿ ಭಾಗವಹಿಸಬಾರದು. ಹೇಳಿಕೆಗಳನ್ನು ಕೊಡಬಾರದು ಮತ್ತು ಟಿಪ್ಪಣಿಗಳನ್ನು ನೀಡಬಾರದು ಎಂದು ಆದೇಶದಲ್ಲಿ ಸೂಚಿಸಿದ್ದಾರೆ.