ಪ್ರಜ್ವಲ್ ರೇವಣ್ಣ, ಹೆಚ್ ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಮನವೊಲಿಸಲು ಯತ್ನಿಸಿದ್ದಕ್ಕೆ ದೇವೇಗೌಡರು ಒಪ್ಪಲಿಲ್ಲ ಎಂದು ಕುಟುಂಬ ಮೂಲಗಳಿಂದ ತಿಳಿದುಬಂದಿದೆ. ಪ್ರಜ್ವಲ್ ಮತ್ತು ಭವಾನಿ ರೇವಣ್ಣ ದೇವೇಗೌಡರ ಮುಂದೆ ಕಣ್ಣೀರು ಹಾಕಿದರೂ ಕೂಡ ದೊಡ್ಡ ಗೌಡರು ಒಂದು ಶಬ್ದವನ್ನೂ ಮಾತನಾಡದೆ, ಹಣೆ ಮೇಲೆ ಕೈಯಿಟ್ಟುಕೊಂಡು ಸುಮ್ಮನೆ ಕುಳಿತಿದ್ದರು. ಮಗ, ಸೊಸೆ ಮತ್ತು ಮೊಮ್ಮಗನಿಗೆ ಸೋಫಾ ಮೇಲೆ ಕುಳಿತುಕೊಳ್ಳುವಂತೆ ಕೈ ಸನ್ನೆ ಮಾತ್ರ ಮಾಡಿದ್ದಾರೆ ದೇವೇಗೌಡರು. ಇವರ ಭೇಟಿ ಸಂದರ್ಭದಲ್ಲಿ ಅಲ್ಲಿ ದೇವೇಗೌಡರ ಪತ್ನಿ ಚನ್ನಮ್ಮ ಮತ್ತು ಮನೆಯ ಸದಸ್ಯರು ಬಿಟ್ಟರೆ ಅಲ್ಲಿ ಬೇರೆ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ.