ಮಂಡ್ಯ: ಲೋಕಸಭಾ ಚುನಾವಣಾ ಪ್ರಚಾರದ ಅಖಾಡದಲ್ಲಿ ಎಂತಹ ಪರಿಸ್ಥಿತಿಯಲ್ಲೂ ವೈಯಕ್ತಿಕ ನಿಂದನೆಗಿಳಿಯದೆ,ಆದರ್ಶ ಮತ್ತು ಅಭಿವೃದ್ಧಿಯ ತಳಹದಿಯ ಮೇಲೆಯೆ ಚುನಾವಣೆ ಗೆಲ್ಲಬಹುದು ಎಂಬುದನ್ನು ತೋರಿಸಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ , ಗೆದ್ದ ನಂತರವೂ ಹಮ್ಮು- ಬಿಮ್ಮು ಇಲ್ಲದೆ ಅದೇ ಹಾದಿಯಲ್ಲಿ ಸಾಗುವಂತಹ ಸಂದೇಶವೊಂದನ್ನು ನೀಡಿದ್ದಾರೆ.
ಚುನಾವಣೆ ಮುಗಿದಿದೆ ಚುನಾವಣೆಯ ಸಂದರ್ಭದಲ್ಲಿ ಗೆಲುವಿನ ಪ್ರತಿಷ್ಠೆಗಲು ಪರಸ್ಪರ ವೈಷಮ್ಯ ಸಹಜವಾಗಿ ಉಂಟಾಗುತ್ತದೆ ಆದರೆ, ನಾವೆಲ್ಲರೂ ಒಂದೇ ಊರಿನಲ್ಲಿ ಬದುಕುತ್ತಿರುವವರು ಪರಸ್ಪರ ಹೊಂದಾಣಿಕೆಯ ಜೀವ ನಡೆಸುತ್ತಿರುವವರು ಚುನಾವಣೆಯ ದ್ವೇಷ, ವೈಷಮ್ಯಗಳನ್ನು ಬಿಟ್ಟು ಒಂದೇ ಕುಟುಂಬದಂತೆ ಬದುಕೋಣ ಎಂದು ಮನವಿ ಮಾಡಿದ್ದಾರೆ.
— sumalatha ambareesh
Advertisement