ಮಂಡ್ಯದಲ್ಲಿ ಭರ್ಜರಿ ಗೆಲುವಿನ ಬಳಿಕ ಬಿಎಸ್ವೈರನ್ನು ಭೇಟಿ ಮಾಡಿದ ಸುಮಲತಾ, ಬಿಜೆಪಿ ಸೇರ್ತಾರಾ?
ದೇಶದಲ್ಲೇ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ...
ಬೆಂಗಳೂರು: ದೇಶದಲ್ಲೇ ತೀವ್ರ ಕುತೂಹಲ ಕೆರಳಿಸಿದ್ದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರು ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು.
ಮಂಡ್ಯ ಲೋಕಸಭೆ ಚುನಾವಣೆ ವೇಳೆ ಬಿಜೆಪಿ ನನ್ನನ್ನು ಬೆಂಬಲಿಸಿತ್ತು. ಹೀಗಾಗಿ ನಾನು ಹೃತ್ಪೂರ್ವಕವಾಗಿ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಬಿಜೆಪಿ ಸೇರ್ಪಡೆ ವಿಚಾರ ಸಂಬಂಧ ಮಾತನಾಡಿದ ಅವರು ನಾನು ಸ್ವತಂತ್ರ್ಯ ಅಭ್ಯರ್ಥಿಯಾಗಿ ಗೆದ್ದಿದ್ದು ನಾನು ವಿಷಯಾಧಾರಿತವಾಗಿ ಬೆಂಬಲ ನೀಡುತ್ತೇನೆ.
ಇನ್ನು ಬಿಜೆಪಿ ಸೇರ್ಪಡೆ ವಿಚಾರವನ್ನು ಮೊದಲಿಗೆ ನಾನು ನನ್ನು ಕ್ಷೇತ್ರದ ನಾಯಕರನ್ನು ಕೇಳಿ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇನೆ. ಸದ್ಯಕ್ಕೆ ನಾನು ಬಿಜೆಪಿ ಸೇರುವುದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಈ ಬಗ್ಗೆ ಯೋಚಿಸುತ್ತನೆ ಎಂದು ಹೇಳಿದರು.