ಪಕ್ಷೇತರ ಶಾಸಕರಾದ ಮುಳುಬಾಗಿಲು ಶಾಸಕ ನಾಗೇಶ್ ಹಾಗೂ ರಾಣೆಬೆನ್ನೂರಿನ ಶಾಸಕ ಆರ್. ಶಂಕರ್, ಅಥಣಿ ಶಾಸಕ ಮಹೇಶ್ ಕುಮಟಹಳ್ಳಿ ಅವರು ರಮೇಶ್ ಜಾರಕಿಹೊಳಿಯನ್ನು ಅವರ ಸೆವೆನ್ ಮಿನಿಸ್ಟರ್ ಕ್ವಾಟ್ರಸ್ ನಲ್ಲಿರುವ ಮನೆಯಲ್ಲಿ ಭೇಟಿ ಮಾಡಿದ ಬಳಿಕ ಎಲ್ಲಾ ಶಾಸಕರು ಖಾಸಗಿ ಹೋಟೆಲಿನತ್ತ ತೆರಳಿ ಅಲ್ಲಿ ಹಿರೆಕೆರೂರು ಶಾಸಕ ಬಿ.ಸಿ.ಪಾಟೀಲ್, ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಜೊತೆ ಸೇರಿ ಪ್ರತ್ಯೇಕ ಸಭೆ ನಡೆಸಿದರು.