ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳ ಪೈಕಿ ಉಭಯ ಪಕ್ಷಗಳು ತಲಾ ಒಂದೊಂದು ಕ್ಷೇತ್ರಗಳನ್ನಷ್ಟೇ ಗೆದ್ದು ಮುಖಭಂಗ ಅನುಭವಿಸಿದ್ದ ಮಿತ್ರ ಪಕ್ಷಗಳು, ಒಂದು ವರ್ಷ ಪ್ರಾಯದ ಸಮ್ಮಿಶ್ರ ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲು ನಿರಂತರ ಸಭೆಗಳನ್ನು ನಡೆಸಿ ಸಮಾಲೋಚನೆ, ಕಾರ್ಯತಂತ್ರ ರೂಪಿಸಿದ್ದವು, ಇದರ ಫಲಿತಾಂಶ ಎಂಬಂತೆ, ಅಂತಿಮವಾಗಿ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿದೆ.