ಭೂ ಕಬಳಿಕೆ ಮಾಡಿಲ್ಲ: ಆರೋಪ ಮಾಡಿರುವವರ ಮೇಲೆ ಮಾನನಷ್ಟ ಮೊಕದ್ದಮೆ- ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ 

ಸರ್ಕಾರಿ ಭೂಮಿ ಕಬಳಿಕೆ ಮಾಡಿರುವುದಾಗಿ ತಮ್ಮ ಮೇಲೆ ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪ ಆಧಾರರಹಿತವಾಗಿದ್ದು,  ಅವರ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ನ್ಯಾಯಾಲಯದಲ್ಲಿ ಮಾನನಷ್ಟ  ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ವಿಧಾನಸಭೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. 
ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ
ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ

ಬೆಂಗಳೂರು: ಸರ್ಕಾರಿ ಭೂಮಿ ಕಬಳಿಕೆ ಮಾಡಿರುವುದಾಗಿ ತಮ್ಮ ಮೇಲೆ ಬಿಜೆಪಿ ವಕ್ತಾರ ಎನ್.ಆರ್ ರಮೇಶ್ ಮಾಡಿರುವ ಆರೋಪ ಆಧಾರರಹಿತವಾಗಿದ್ದು,  ಅವರ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಮಂಡಿಸಿ ನ್ಯಾಯಾಲಯದಲ್ಲಿ ಮಾನನಷ್ಟ  ಮತ್ತು ಕ್ರಿಮಿನಲ್ ಮೊಕದ್ದಮೆ ದಾಖಲಿಸುವುದಾಗಿ ವಿಧಾನಸಭೆ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಮೇಲೆ ಅನಗತ್ಯ ಆರೋಪ ಮಾಡಿರುವವರಿಗೆ ಬುದ್ದಿ ಭ್ರಮಣೆಯಾಗಿದೆ. ಈ ರೀತಿ ಮಂಗನಾಟ ಆಡುವವರನ್ನು ಬಿಜೆಪಿ ವಕ್ತಾರರನ್ನಾಗಿ ನೇಮಿಸಿಕೊಂಡಿರುವುದು ತಮಗೆ ಅಚ್ಚರಿ ತರಿಸಿದೆ ಎಂದರು. 

ಬೆಂಗಳೂರಿನ ಭವಾನಿ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿಯ ಕೆಲವರು ಈ ವರ್ಷದ ಜನವರಿಯಲ್ಲಿ ಅರ್ಜಿಗಳ ಸಮಿತಿಗೆ ಮನವಿ ಸಲ್ಲಿಸಿ ಬನಶಂಕರಿ ೩ನೇ ಹಂತದ ಭವಾನಿ ಲೇಔಟ್‌ನಲ್ಲಿ ಮಹಾನಗರ ಪಾಲಿಕೆ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸ.ನಂ. ೧೨೫ ಮತ್ತು ೧೨೬ ರಲ್ಲಿ ಉದ್ಯಾನವನ ಮತ್ತು ಮೈದಾನ ಅಭಿವೃದ್ಧಿ ಮಾಡುತ್ತಿದೆ ಎಂದು ದೂರು ನೀಡಿದ್ದರು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com