ಇದು ನನ್ನ ಕೊನೆಯ ಚುನಾವಣೆ,ಮತ್ತೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ :ಕೆ.ಬಿ.ಕೋಳಿವಾಡ

ಈ ಉಪಚುನಾವಣೆ ನನ್ನ ಕೊನೆಯ ಚುನಾವಣೆಯಾಗಿದ್ದು, ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೀಗಾಗಿ ಗೆಲುವಿನ ಮೂಲಕ ನನಗೆ ಬಿಳ್ಕೋಡಿ ಎಂದು ಕ್ಷೇತ್ರದ ಮತದಾರರಲ್ಲಿ ಮನವಿ ರಾಣೆ ಬೆನ್ನೂರು..
ಕೆಬಿ ಕೋಳಿವಾಡ
ಕೆಬಿ ಕೋಳಿವಾಡ

ರಾಣೆಬೆನ್ನೂರು: ಈ ಉಪಚುನಾವಣೆ ನನ್ನ ಕೊನೆಯ ಚುನಾವಣೆಯಾಗಿ ದ್ದು,ಇನ್ನು ಮುಂದೆ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹೀಗಾಗಿ ಗೆಲುವಿನ ಮೂಲಕ ನನಗೆ ಬಿಳ್ಕೋಡಿ ಎಂದು ಕ್ಷೇತ್ರದ ಮತದಾರರಲ್ಲಿ ಮನವಿ ರಾಣೆ ಬೆನ್ನೂರು ಕ್ಷೇತ್ರದ ಕಾಂಗ್ರೆ ಸ್ ಅಭ್ಯರ್ಥಿ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ಮತದಾರರಲ್ಲಿ ಮಾಡಿಕೊಂಡಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಳೆದ ಐವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದು,ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ.ಅದು ಕ್ಷೇತ್ರದ ಜನರಿಗೂ ತಿಳಿದಿದೆ.ಸದ್ಯ ರಾಜಕೀಯ ನಿವೃತ್ತಿ ಅಂಚಿನಲ್ಲಿದ್ದೇನೆ.ಇದೊಂದು ಬಾರಿ ನನ್ನ ಗೆಲ್ಲಿಸಿ,ಮತದಾರರು ನನ್ನ ಕೈ ಹಿಡಿಯಬೇಕು ಎಂದು ಅವರು ಮನವಿ ಮಾಡಿದರು.

ಕಳೆದ ಐವತ್ತು ವರ್ಷಗಳಿಂದ ರಾಜಕೀಯ ಜೀವನದಲ್ಲಿದ್ದು, ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಅದು ಕ್ಷೇತ್ರದ ಜನರಿಗೂ ತಿಳಿದಿದೆ. ಸದ್ಯ ರಾಜಕೀಯ ನಿವೃತ್ತಿ ಅಂಚಿನಲ್ಲಿದ್ದೇನೆ. ಇದೊಂದು ಬಾರಿ ನನ್ನ ಗೆಲ್ಲಿಸಿ, ಮತದಾರರು ನನ್ನ ಕೈ ಹಿಡಿಯಬೇಕು ಎಂದು ಮಾಜಿ ಸ್ಪೀಕರ್​ ಮನವಿ ಮಾಡಿದರು.

ನಾನು ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ. ಇದು ನನ್ನ ಕೊನೆ ಚುನಾವಣೆ. ಮುಂದೆ ಮಗನಿಗೆ ಟಿಕೆಟ್ ಬೇಕೆಂದು ಬಯಸುತ್ತೇನೆ. ಮುಂದೆ ಪುತ್ರ ಪ್ರಕಾಶ್​​ ಕೋಳಿವಾಡ ಬರುತ್ತಾರೆ. ಈಗಲೂ ಸಾರ್ವತ್ರಿಕ ಚುನಾವಣೆ ಅಲ್ಲಗಳೆಯಲು ಆಗಲ್ಲ. ಉಪ ಚುನಾವಣೆ ಫಲಿತಾಂಶದ ನಂತರ ನೋಡೋಣ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com