ಷರತ್ತಿಲ್ಲದೆ ಬಿಜೆಪಿ ಸೇರಿದ್ದೇನೆ- ಪ್ರತಾಪ್ ಗೌಡ ಪಾಟೀಲ್ 

ಶೀಘ್ರವೇ ಮಸ್ಕಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೫೫೦ ಕೋಟಿ ರೂಪಾಯಿ ಮಂಜೂರಾಗಲಿದೆ ಎಂದು ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದ್ದಾರೆ.
ಪ್ರತಾಪ್ ಗೌಡ ಪಾಟೀಲ್
ಪ್ರತಾಪ್ ಗೌಡ ಪಾಟೀಲ್

ರಾಯಚೂರು: ಶೀಘ್ರವೇ ಮಸ್ಕಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ೫೫೦ ಕೋಟಿ ರೂಪಾಯಿ ಮಂಜೂರಾಗಲಿದೆ ಎಂದು ಮಸ್ಕಿ ಕ್ಷೇತ್ರದ ಅನರ್ಹ ಶಾಸಕ ಪ್ರತಾಪಗೌಡ ಪಾಟೀಲ್ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷ ಸೇರಿದ ನಂತರ ಇದೇ ಪ್ರಥಮ ಬಾರಿಗೆ ಜಿಲ್ಲಾ ಬಿಜೆಪಿ ಕಚೇರಿಗೆ ಆಗಮಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಿಲ್ಲದೆ ಕ್ಷೇತ್ರ ಅನಾಥವಾಗಿಲ್ಲ. ಸಂಸದ ಸಂಗಣ್ಣ ಕರಡಿ ಕ್ಷೇತ್ರದ ಅಭಿವೃದ್ಧಿ ಕುರಿತು ಪರಿಶೀಲನೆ ಮಾಡುತ್ತಿದ್ದಾರೆ. ಬಿಜೆಪಿ ಸರಕಾರ ಅಧಿಕಾರಕ್ಕೆ ೧೦೦ ದಿನಗಳಲ್ಲಿ ೧೦೦ ಕೋ.ರೂ ಅನುದಾನ ಮಂಜೂರಾಗಿದೆ ಎಂದು ಹೇಳಿದರು.

ಮಸ್ಕಿ ಕ್ಷೇತ್ರದ ೧೩ ಕೆರೆಗಳ ಭರ್ತಿಗೆ ಹಾಗೂ ಮಸ್ಕಿ ನಾಲಾ ಮತ್ತು ಕನಕ ನಾಲಾ ಯೋಜನೆಗಳಿಗೆ ಬರುವ ಕೆಲವೇ ದಿನಗಳಲ್ಲಿ ೫೦೨ ಕೋ.ರೂ ಅನುದಾನ ಮಂಜೂರಾಗಲಿದೆ. ಈ ಮೂಲಕ ಕ್ಷೇತ್ರದ ಬಹುದಿನಗಳ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಒಪ್ಪಿದ್ದಾರೆ ಎಂದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com