ಉಪ ಚುನಾವಣೆ: ಯಶವಂತಪುರ ಕ್ಷೇತ್ರಕ್ಕೆ ಪಿ.ನಾಗರಾಜ್ ಕಾಂಗ್ರೆಸ್ ಅಭ್ಯರ್ಥಿ

ಯಶವಂತಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಿ. ನಾಗರಾಜ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಿ. ನಾಗರಾಜ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ. ಇಲ್ಲಿನ ಚುನಾವಣಾ ಕಣದಿಂದ ರಾಜ್ ಕುಮಾರ್ ಹಿಂದೆ ಸರಿದ ಕಾರಣ ಪಿ. ನಾಗರಾಜ್ ಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಖುದ್ದು ಕಾಂಗ್ರೆಸ್ ಹೈ ಕಮಾಂಡ್ ಪಿ. ನಾಗರಾಜ್ ಗೆ ಟಿಕೆಟ್ ನೀಡಿದೆ.

ಈಗಾಗಲೇ ರಾಜ್ಯ ಉಪ ಚುನಾವಣೆಗೆ 14 ಕ್ಷೇತ್ರಗಳಿಗೂ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಕ್ಷೇತ್ರಗಳಿಗೆ ಟಿಕೆಟ್ ಫೈನಲ್ ಮಾಡಲಾಗಿದೆ. 

ಮೊದಲಿಗೆ ಯಶವಂತಪುರದಿಂದ ರಾಜ್ ಕುಮಾರ್ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು. ಆದರೆ, ಎಸ್. ಟಿ ಸೋಮಶೇಖರ್ ಎದುರು ಸ್ಪರ್ಧಿಸಲು ರಾಜ್ ಕುಮಾರ್ ಹಿಂದೇಟು ಹಾಕಿದ್ದಾರೆ. ಕ್ಷೇತ್ರದ ಪ್ರಮುಖ ಮುಖಂಡರು, ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಪಿ. ನಾಗರಾಜ್ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಿಸಿದೆ ಎನ್ನಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com