ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಎವರ್ ಗ್ರೀನ್ ಮುಖ್ಯಮಂತ್ರಿ ನಿಖಿಲ್ ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಎಂದು ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿಶಂಕರ್ ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಶಾಸಕ ಗೌರಿ ಶಂಕರ್, ಇಂದಿನ ರಾಜಕೀಯ ಪರಿಸ್ಥಿತಿಗಳನ್ನು ಗಮನಿಸಿದಾಗ. ನನ್ನ ವೈಯಕ್ತಿಕ ಅಭಿಪ್ರಾಯದ ಪ್ರಕಾರ ಮುಂದಿನ ಮುಖ್ಯಮಂತ್ರಿ ನಿಖಿಲ್ ಕುಮಾರಸ್ವಾಮಿ ಎಂದು ಭವಿಷ್ಯ ನುಡಿದಿದ್ದಾರೆ.
ಕುಮಾರಸ್ವಾಮಿ ಎವರ್ ಗ್ರೀನ್ ಮುಖ್ಯಮಂತ್ರಿ ಆಗಿರುತ್ತಾರೆ. ಆದರೆ ನಿಖಿಲ್ ಮುಂದಿನ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ಟೀ ಮಾರಿದವರು ಈ ದೇಶದ ಪ್ರಧಾನಿಯಾಗಬೇಕಾದರೆ ಸಾವಿರಾರು ರೈತರ ಸಾಲ ಮನ್ನಾ ಮಾಡಿದ ಕುಮಾರಣ್ಣನ ಏಕ ಚಕ್ರಾಧಿಪತಿ ಮಾಡಲು ಸಾಧ್ಯ ಇಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.
Advertisement