ಬೆಂಗಳೂರು: ಸಚಿವ ಮಾಧುಸ್ವಾಮಿ ಪರವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುರುಬ ಸಮುದಾಯದ ಕ್ಷಮೆ ಯಾಚಿಸಿದ್ದಾರೆ.
ಹುಳಿಯಾರ್ ಸರ್ಕಲ್ಗೆ ಕನಕದಾಸರ ಹೆಸರಿಡಲು ನಮ್ಮದೇನು ತಕರಾರಿಲ್ಲ, ಮಾಧುಸ್ವಾಮಿಗೂ ಯಾವುದೇ ತಕರಾರು ಇಲ್ಲ. ಮಾಧುಸ್ವಾಮಿ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಹೊಸದುರ್ಗದ ಕಾಗಿನೆಲೆ ಶ್ರೀಗಳ ವಿಚಾರದಲ್ಲಿ ಕೊಟ್ಟ ಹೇಳಿಕೆಯಲ್ಲಿ ತಪ್ಪು ಗ್ರಹಿಕೆಯಾಗಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ಸಚಿವ ಮಾಧುಸ್ವಾಮಿ ಈಗಾಗಲೇ ಹೇಳಿದ್ದಾರೆ. ಅವರ ಪರವಾಗಿ ನಾನು ಆ ಸಮಾಜದ ಬಂಧುಗಳಲ್ಲಿಕ್ಷಮೆ ಯಾಚಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇದರಲ್ಲಿ ಗೊಂದಲ, ಅಪಾರ್ಥಕ್ಕೆ ಎಡೆ ಮಾಡಿಕೊಡುವುದು ಬೇಡ. ಕನಕವೃತ್ತ ಎಂದು ಹೆಸರಿಡಲು ಮಾಧುಸ್ವಾಮಿ ಒಪ್ಪಿಗೆ ನೀಡಿದ್ದಾರೆ. ಇದನ್ನು ಇಲ್ಲಿಗೆ ಕೊನೆ ಮಾಡಬೇಕು ಎಂದು ಎಲ್ಲರಲ್ಲೂ ಕೈ ಮುಗಿದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
Advertisement