ಬೆಂಗಳೂರು: ಉಪಚುನಾವಣಾ ಪ್ರಚಾರದ ಅಖಾಡಕ್ಕೆ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಳಿದಿದ್ದು, ಕೆ.ಆರ್.ಪೇಟೆ ಜೆಡಿಎಸ್ ಅಭ್ಯರ್ಥಿ ಬಿ.ಎಲ್.ದೇವರಾಜ್ ಪರ ಇಂದು ಪ್ರಚಾರ ನಡೆಸಿದರು.
ತಾಲೂಕಿನ ಮಾಕವಳ್ಳಿಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಪಕ್ಷ ಕಷ್ಟದಲ್ಲಿದ್ದು, ನಮ್ಮ ಕೈಹಿಡಿಯಬೇಕಿದೆ.
ತಂದೆ ಕುಮಾರಸ್ವಾಮಿಗೆ ಕೆಲವರು ಬೆನ್ನಿಗೆ ಚೂರಿ ಹಾಕಿ ಹೋಗಿದ್ದಾರೆ. ನಾರಾಯಣಗೌಡ ಕೂಡ ಆಮಿಷಕ್ಕೆ ಬಲಿಯಾಗಿ ಬಿಜೆಪಿ ಸೇರಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
Advertisement