ರಾಜಕೀಯ
ವೀರಶೈವ ಲಿಂಗಾಯಿತರು ಬಿಜೆಪಿಗೆ ಮತ ಹಾಕಬೇಕು: ಮುಖ್ಯಮಂತ್ರಿ ಹೇಳಿಕೆ ವಿರುದ್ಧ ಆಯೋಗಕ್ಕೆ ಜೆಡಿಎಸ್ ದೂರು
ಮುಂದಿನ ತಿಂಗಳು 5 ರಂದು ರಾಜ್ಯದಲ್ಲಿ ನಡೆಯಲಿರುವ 15 ಕ್ಷೇತ್ರಗಳ ಉಪ ಚುನಾವಣೆಯ ಪ್ರಚಾರದ ಅಖಾಡ ರಂಗೇರಿದ್ದು, ಆರೋಪ, ಪ್ರತ್ಯಾರೋಪ ತಾರಕ್ಕಕೇರಿದೆ.
ಬೆಂಗಳೂರು: ಮುಂದಿನ ತಿಂಗಳು 5 ರಂದು ರಾಜ್ಯದಲ್ಲಿ ನಡೆಯಲಿರುವ 15 ಕ್ಷೇತ್ರಗಳ ಉಪ ಚುನಾವಣೆಯ ಪ್ರಚಾರದ ಅಖಾಡ ರಂಗೇರಿದ್ದು, ಆರೋಪ, ಪ್ರತ್ಯಾರೋಪ ತಾರಕ್ಕಕೇರಿದೆ.
ಈ ಮಧ್ಯೆ ವೀರಶೈವ ಲಿಂಗಾಯಿತರು ಬಿಜೆಪಿಗೆ ಮತ ಹಾಕುವಂತೆ ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಯಡಿಯೂರಪ್ಪ, ನನನ್ನು ಮುಖ್ಯಮಂತ್ರಿಯಾಗಿ ಮುಂದುವರೆಸಲು ಇಚ್ಚಿಸಿದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡಿದ್ದರು.
ಅಲ್ಲದೇ ಹಿಂದೂಗಳು ಇತರ ಪಕ್ಷದ ಯಾವುದೇ ಅಭ್ಯರ್ಥಿಗಳಿಗೆ ಮತ ನೀಡದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಗ್ರಹಿಸಿದ್ದರು ಎನ್ನಲಾಗಿದೆ.