ಮೈಸೂರು: ಹುಣಸೂರು ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಹಿನ್ನಡೆಯಾಗಿದೆ, ಹಿರಿಯ ಕಾಂಗ್ರೆಸ್ ಮುಖಂಡ ಸಿ.ಟಿ ರಾಜಣ್ಣ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಸೇರಲಿದ್ದಾರೆ.
ಎರಡು ಬಾರಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ ಆಯ್ಕೆಯಾಗಿದ್ದ ರಾಜಣ್ಣ ಬಿಜೆಪಿ ಸೇರುವ ಮೂಲಕ ಕಾಂಗ್ರೆಸ್ ಗೆ ಶಾಕ್ ನೀಡಿದ್ದಾರೆ. ರಾಜಣ್ಣ ಅವರ ಪತ್ನಿ ಜಯಲಕ್ಷ್ಮಿ ಹಾಲಿ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದಾರೆ.
ತಮ್ಮ ಬೆಂಬಲಿಗರ ಜೊತೆ ಸಭೆ ನಾಯಕರುಗಳ ಜೊತೆ ಸಭೆ ನಡೆಸಿ ಕಾಂಗ್ರೆಸ್ ನಾಯಕರ ವಿರುದ್ದ ಹರಿ ಹಾಯ್ದಿದ್ದಾರೆ, ಮಾಜಿ ತಾಲೂಕು ಪಂಚಾಯಿತಿ ಸದಸ್ಯ ಸದಾನಂದ, ಸ್ವಾಮಿ ಮುಂತಾದವರೆಲ್ವಾ ಬಿಜೆಪಿ ಸೇರಲು ನಿರ್ಧರಿಸಿದ್ದಾರೆ. ಜೊತೆಗೆ ವಿಶ್ವನಾಥ್ ಅವರ ಗೆಲುವಿಗೆ ಶ್ರಮಿಸುವುದಾಗಿ ಹೇಳಿದ್ದಾರೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರಾಜಣ್ಣ ಪಕ್ಷೇತರವಾಗಿ ಸ್ಪರ್ಧಿಸಿ 9 ಸಾವಿರ ಮತ ಗಳಿಸಿದ್ದರು.
ರಾಜಣ್ಣ ಒಕ್ಕಲಿಗರ ಪ್ರಭಾವಿ ನಾಯಕರಾಗಿದ್ದು, ನಿಷ್ಠಾವಂತ ಕಾಂಗ್ರೆಸ್ ನಾಯಕರಾಗಿದ್ದರು. ರಾಜಣ್ಣ ಅವರ ಈ ನಿರ್ಧಾರದಿಂದ ಬಿಜೆಪಿಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ.
Advertisement