ಬೆಂಗಳೂರು ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಂಎಲ್​ಸಿ ಪುಟ್ಟಣ್ಣ; ಯಡಿಯೂರಪ್ಪ

ವಿಧಾನಪರಿಷತ್​ ಚುನಾವಣೆಗೆ ಉಚ್ಚಾಟಿತ  ಜೆಡಿಎಸ್​ ಎಂಎಲ್​ಸಿ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ ಎಂದು ಸಿಎಂ ಬಿ.ಎಸ್​ಯಡಿಯೂರಪ್ಪ ಘೋಷಿಸಿದ್ದಾರೆ. 
ಪುಟ್ಟಣ್ಣ
ಪುಟ್ಟಣ್ಣ

ಮೈಸೂರು: ವಿಧಾನಪರಿಷತ್​ ಚುನಾವಣೆಗೆ ಉಚ್ಚಾಟಿತ  ಜೆಡಿಎಸ್​ ಎಂಎಲ್​ಸಿ ಪುಟ್ಟಣ್ಣ ಬಿಜೆಪಿ ಅಭ್ಯರ್ಥಿ ಎಂದು ಸಿಎಂ ಬಿ.ಎಸ್​ಯಡಿಯೂರಪ್ಪ ಘೋಷಿಸಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ಅವರು, ಪುಟ್ಟಣ್ಣ ಮೂರು ಬಾರಿ ಜೆಡಿಎಸ್​​ ಪ್ರತಿನಿಧಿಸಿದ್ದರು. ಪುಟ್ಟಣ್ಣ ಗೆಲ್ಲುವ ಅಭ್ಯರ್ಥಿ. ಹೀಗಾಗಿ ಅವರನ್ನೇ ಬಿಜೆಪಿ  ಅಭ್ಯರ್ಥಿಯನ್ನಾಗಿ ಘೋಷಣೆ ಮಾಡುತ್ತಿದ್ದೇನೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ಪುಟ್ಟಣ್ಣ ಬಿಜೆಪಿಯಿಂದ ಸ್ಪರ್ಧೆ ಮಾಡಲಿದ್ದಾರೆ ಎಂದು ಬಿಎಸ್​ವೈ ಹೇಳಿದರು. 

ನಾನು ಶೀಘ್ರದಲ್ಲೆ ಬಿಜೆಪಿ ಸೇರುತ್ತೇನೆ. ಟಿಕೆಟ್ ಘೋಷಣೆ ಮಾಡಿದ್ದು ಸಂತೋಷ ತಂದಿದೆ. ನನಗೆ ಈ ಚುನಾವಣೆಯಲ್ಲಿ ಯಾವುದೇ ಫೈಟ್ ಇರುವುದಿಲ್ಲ. ನಾನು ವೈಯಕ್ತಿಕ ವರ್ಚಸ್ಸಿನಿಂದ ಮೂರು ಬಾರಿ ಗೆದ್ದಿದ್ದೇನೆ. ಜೆಡಿಎಸ್‌ ಬಿಟ್ಟ ಮಾತ್ರಕ್ಕೆ ಈ ಚುನಾವಣೆಯಲ್ಲಿ ಬೇರೆ ಪರಿಣಾಮ ಉಂಟಾಗಲ್ಲ. ಬಿಜೆಪಿ ಅಭ್ಯರ್ಥಿ ಆಗಿರುವುದಕ್ಕೆ ನನ್ನ ಶಕ್ತಿ ಹೆಚ್ಚಿದೆ ಎಂದು ಪುಟ್ಟಣ್ಣ ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com