''ವಿಶ್ವನಾಥ್ ಒಬ್ಬ ಸೀಸನ್ ಪಾಲಿಟಿಷಿಯನ್ : ಫಲಿತಾಂಶದ ಸೋನಿಯಾ ಗಾಂಧಿ ನಿರ್ಧಾರ ಕಾದು ನೋಡೋಣ''

ಮಹಾರಾಷ್ಟ್ರ ರಾಜಕಾರಣ ಕರ್ನಾಟಕಕ್ಕೂ ಅನ್ವಯವಾಗುತ್ತದೆ. ಕರ್ನಾಟಕದಲ್ಲೂ ಏನೂ ಬೇಕಾದರೂ ಆಗಬಹುದು. ಉಪಚುನಾವಣೆ ಬಳಿಕ ಏನಾಗುತ್ತೆಂದು ಕಾದು ನೋಡಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ವಿಶ್ವನಾಥ್
ವಿಶ್ವನಾಥ್

ಮೈಸೂರು:  ಮಹಾರಾಷ್ಟ್ರ ರಾಜಕಾರಣ ಕರ್ನಾಟಕಕ್ಕೂ ಅನ್ವಯವಾಗುತ್ತದೆ. ಕರ್ನಾಟಕದಲ್ಲೂ ಏನೂ ಬೇಕಾದರೂ ಆಗಬಹುದು. ಉಪಚುನಾವಣೆ ಬಳಿಕ ಏನಾಗುತ್ತೆಂದು ಕಾದು ನೋಡಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು. ಕರ್ನಾಟಕದ ರಾಜಕಾರಣಕ್ಕೂ ಇದು ಅನ್ವಯವಾಗುತ್ತದೆ. ಉಪಚುನಾವಣೆ ಫಲಿತಾಂಶ ನಂತರ ಕರ್ನಾಟಕದಲ್ಲೂ ಏನೇನು ಬದಲಾವಣೆ ಆಗುತ್ತೆ ನೋಡೋಣ. ಫಲಿತಾಂಶ ಬಂದ ಮೇಲೆ ಸೋನಿಯಾಗಾಂಧಿ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದನ್ನೂ ನೋಡೋಣ," ಎಂದರು.

ವಿಶ್ವನಾಥ್ ಒಬ್ಬ ಸೀಸನ್ ಪಾಲಿಟಿಷಿಯನ್. ನನ್ನ ಬಗ್ಗೆಯೂ ವಿಶ್ವನಾಥ್​ ಹೊಗಳಿದ್ದಾರೆ. ಸಿದ್ದರಾಮಯ್ಯ ಬಗ್ಗೆಯೂ ಹೊಗಳಿದ್ದಾರೆ. ಜನ ಇದೆಲ್ಲವನ್ನೂ ಅರ್ಥ ಮಾಡಿಕೊಂಡಿದ್ದಾರೆ. ಜನ ಇದನ್ನು ಅರ್ಥ ಮಾಡಿಕೊಳ್ಳದ ಸ್ಥಿತಿಯಲ್ಲಿದ್ದಾರೆ ಅಂದುಕೊಳ್ಳುದು ತಪ್ಪು ಎಂದು ವ್ಯಂಗ್ಯವಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com