ಸಿದ್ದರಾಮಯ್ಯ ಸುಳ್ಳು ಹೇಳುವುದರಲ್ಲಿ ನಿಸ್ಸೀಮ  - ಎನ್. ರವಿಕುಮಾರ್ 

ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮನಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಟೀಕಿಸಿದ್ದಾರೆ.
ಸಿದ್ದರಾಮಯ್ಯ, ಎನ್. ರವಿಕುಮಾರ್
ಸಿದ್ದರಾಮಯ್ಯ, ಎನ್. ರವಿಕುಮಾರ್

ಹೊಸಪೇಟೆ : ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮನಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಟೀಕಿಸಿದ್ದಾರೆ.

ಸಿದ್ದರಾಮಯ್ಯ ಹೇಳುವುದೆಲ್ಲಾ ಸುಳ್ಳು. ಸುಳ್ಳು ಹೇಳುವುದು ಅವರಿಗೆ ಕುಟುಂಬದ ದೇವರಿದ್ದಂತೆ. ಅವರು ಸುಳ್ಳುಗಳ ಚಾಂಪಿಯನ್ ಆಗಿದ್ದಾರೆ ಎಂದಿದ್ದಾರೆ. ಎಚ್ ಡಿ ಕುಮಾರಸ್ವಾಮಿ ಹೇಳುವುದು ಸಂಪೂರ್ಣ ಸುಳ್ಳಿನಿಂದ ಕೂಡಿದ್ದರೆ , ಸಿದ್ದರಾಮಯ್ಯ ಅರ್ಧ ಸುಳ್ಳು ಹೇಳುತ್ತಾರೆ. ಇದೇ ಇವರಿಬ್ಬರ ನಡುವಿನ ವ್ಯತ್ಯಾಸ ಎಂದು ಸುದ್ದಿಗಾರರಿಗೆ ಹೇಳಿದ್ದಾರೆ.

ಚುನಾವಣೆಯಲ್ಲಿ ಸೋತರೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ. ಕಾಂಗ್ರೆಸ್ ಅಭ್ಯರ್ಥಿ ಸೋಲುವ ಭೀತಿಯಲ್ಲಿ ಇವರಿಬ್ಬರೂ ಹೊಸಪೇಟೆಗೆ ಗುರುವಾರ ಭೇಟಿ ನೀಡುತ್ತಿದ್ದಾರೆ.  ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಅವರ ವರ್ತನೆಯಿಂದ ಬೇಸತ್ತು ಹಿರಿಯ ಕಾಂಗ್ರೆಸ್ ಮುಖಂಡರು ಪ್ರಚಾರದಲ್ಲಿ ಪಾಲ್ಗೊಳ್ಳುತ್ತಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನಾಳೆ ಆನಂದ್ ಸಿಂಗ್ ಪರ ಪ್ರಚಾರ ನಡೆಸಲಿದ್ದಾರೆ. ನವೆಂಬರ್ 30 ರಂದು ಬಿಜೆಪಿಯಿಂದ ದಲಿತ ಮುಖಂಡರ ಸಮಾವೇಶವನ್ನು ಆಯೋಜಿಸಲಾಗಿದೆ  ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com