ಎಂಟು ಸ್ಥಾನ ಗೆಲ್ಲದಿದ್ದರೆ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ?

ಎಂಟು ಸ್ಥಾನ ಗೆಲ್ಲದಿದ್ದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ.  ನೀವೂ ಎಂಟು ಸ್ಥಾನ ಗೆಲ್ಲದಿದ್ದರೆ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ? ಎಂದು ಸಿದ್ದರಾಮಯ್ಯಗೆ  ಸಚಿವ ಕೆ.ಎಸ್. ಈಶ್ವರಪ್ಪ ಬಹಿರಂಗ ಸವಾಲು ಹಾಕಿದರು.
ಕೆಎಸ್ ಈಶ್ವರಪ್ಪ
ಕೆಎಸ್ ಈಶ್ವರಪ್ಪ

ಹುಬ್ಬಳ್ಳಿ: ಉಪ ಚುನಾವಣೆ ಬಳಿಕ ನಾನೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೆಯನ್ನು ಭ್ರಮೆ ಅನ್ನಬೇಕೋ, ಕನಸು ಅನ್ನಬೇಕೋ ತಿಳಿಯುತ್ತಿಲ್ಲ. ಎಂಟು ಸ್ಥಾನ ಗೆಲ್ಲದಿದ್ದರೆ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವೆ.  ನೀವೂ ಎಂಟು ಸ್ಥಾನ ಗೆಲ್ಲದಿದ್ದರೆ ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ? ಎಂದು ಸಿದ್ದರಾಮಯ್ಯಗೆ  ಸಚಿವ ಕೆ.ಎಸ್. ಈಶ್ವರಪ್ಪ ಬಹಿರಂಗ ಸವಾಲು ಹಾಕಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಒಬ್ಬ ಹುಚ್ಚ, ಹುಚ್ಚಿನಿಂದ ಹೊರ ಬಂದಿಲ್ಲ. ಮುಖ್ಯಮಂತ್ರಿ ಸ್ಥಾನದ ಹುಚ್ಚಿನಿಂದ, ಭ್ರಮೆಯಿಂದ ಹೊರ ಬರಲು ಆಗುತ್ತಿಲ್ಲ ಎಂದು ಕಿಡಿಕಾರಿದರು.

ಸಿದ್ದರಾಮಯ್ಯ ಜೊತೆ ಯಾವುದೇ ಕಾಂಗ್ರೆಸ್ ನಾಯಕರಿಲ್ಲ. ಅವರೊಬ್ಬ ಸ್ವಾರ್ಥಿ, ರಾಜ್ಯದಲ್ಲಿ ಯಾರನ್ನು ಬೆಳೆಯಲು ಬಿಡುತ್ತಿಲ್ಲ. ಯಾವ ಕುರುಬ, ಹಿಂದುಳಿದ ನಾಯಕರನ್ನು ಬೆಳೆಸಿದ್ದಾರೆ. ಎಚ್. ವಿಶ್ವನಾಥ ಮುಗಿಸಲು ಹೆಜ್ಜೆ ಹೆಜ್ಜೆಗೂ ಪ್ರಯತ್ನ ಮಾಡಿದರು.

ಮುಂದಿನ ಮೂರುವರೆ ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸ್ಪಷ್ಟ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com