ವಿಜಯನಗರ ಜಿಲ್ಲೆ ರಚನೆ ವಿವಾದ: ಬಳ್ಳಾರಿ ಶಾಸಕರು, ಸಂಸದರ ಸಭೆ ಕರೆದ ಸಿಎಂ ಬಿಎಸ್ ವೈ

ತೀವ್ರ ಚರ್ಚೆಗೆ ಗ್ರಾಸವಾಗಿರುವ ವಿಜಯನಗರ ಜಿಲ್ಲೆ ರಚನೆ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಳ್ಳಾರಿ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತೀವ್ರ ಚರ್ಚೆಗೆ ಗ್ರಾಸವಾಗಿರುವ ವಿಜಯನಗರ ಜಿಲ್ಲೆ ರಚನೆ ಸಂಬಂಧ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಳ್ಳಾರಿ ಜನಪ್ರತಿನಿಧಿಗಳ ಸಭೆ ಕರೆದಿದ್ದಾರೆ.

ನಾಳೆ ಅಂದರೆ ಅಕ್ಟೋಬರ್ 2ರಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಳ್ಳಾರಿ ಜಿಲ್ಲೆಯ ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ಕರೆದಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಅಕ್ಟೋಬರ್ 2 ರಂದು ಮಧ್ಯಾಹ್ನ 3.30ಕ್ಕೆ ಸಭೆ ಕರೆಯಲಾಗಿದ್ದು ಅಂದು ಜಿಲ್ಲೆಯ ಬಿಜೆಪಿ,ಕಾಂಗ್ರೆಸ್ ಶಾಸಕರು,ಸಂಸದರು,ವಿಧಾನ ಪರಿಷತ್ ಸದಸ್ಯರು ಸಭೆಗೆ ಬರುವಂತೆ ಆಹ್ವಾನ ನೀಡಿದ್ದಾರೆ.

ವಿಜಯ ನಗರ ಜಿಲ್ಲೆ ರಚನೆ ವಿರೋಧಿಸಿರುವ ಬಳ್ಳಾರಿ ಜಿಲ್ಲೆಯ ರೆಡ್ಡಿ ಸಹೋದರರು ಹಾಗೂ ಶಾಸಕರನ್ನು ಸಮಾಧಾನಗೊಳಿಸಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಏಈ ಸಭೆ ಕರೆದಿದ್ದಾರೆ ಎನ್ನಲಾಗಿದೆ.

ಈ ಹಿಂದೆ ಬಳ್ಳಾರಿ ಜಿಲ್ಲೆಯ ವಿಭಜನೆ ಮಾಡಿ ವಿಜಯನಗರವನ್ನು ಪ್ರತ್ಯೇಕ ಜಿಲ್ಲೆಯನ್ನಾಗಿಸುವ ಕುರಿತು ಹಾಲಿ ಬಿಜೆಪಿ ಸರ್ಕಾರ ಮುಂದಾಗಿದೆ. ಆದರೆ ಇದಕ್ಕೆ ಬಳ್ಳಾರಿಯ ಬಿಜೆಪಿ ಮುಖಂಡರೇ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರಮುಖವಾಗಿ ರೆಡ್ಡಿ ಸಹೋದರರು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com