ಜೆಡಿಎಸ್ ಮತ್ತೊಂದು ವಿಕೆಟ್ ಪತನ? ಗುಬ್ಬಿ ಶಾಸಕನಿಗೆ  ಬಿಜೆಪಿ ಗಾಳ!

ವಿಧಾನಸಭೆ ಉಪ-ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಬ್ಬ ಜೆಡಿಎಸ್ ಶಾಸಕನಿಗೆ ಗಾಳ ಹಾಕಲು ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್
ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್

ತುಮಕೂರು: ವಿಧಾನಸಭೆ ಉಪ-ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಬ್ಬ ಜೆಡಿಎಸ್ ಶಾಸಕನಿಗೆ ಗಾಳ ಹಾಕಲು ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಹೇಳಿಕೆ ಈ ಸುಳಿವಿಗೆ ಇನ್ನಷ್ಟು ಪುಷ್ಠಿಕೊಟ್ಟಿದೆ. ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಅವರು ಎಸ್.ಆರ್ ಶ್ರೀನಿವಾಸ್ ಮನೆಗೆ ಹೋಗಿ ಬಿಜೆಪಿಯಿಂದ ಸ್ಪರ್ಧಿಸುವಂತೆ ಒತ್ತಡ ಹಾಕಿದ್ದಾರೆ. ಯಡಿಯೂರಪ್ಪಗೆ ಹೇಳಿ ಟಿಕೆಟ್ ಕೊಡಿಸುವುದಾಗಿ ಹೇಳಿದ್ದಾರೆ ಎಂದು ಎಸ್ ಆರ್ ಶ್ರೀನಿವಾಸ್ ತಿಳಿಸಿದ್ದಾರೆ.

ಬೇಕಿದ್ದರೆ ಅವರು ಬಂದಿರುವುದಕ್ಕೆ ಸಾಕ್ಷಿಯಾಗಿ ಮನೆಯ ಸಿಸಿಟಿವಿ ನೋಡಿ. ಬೆಟ್ಟಸ್ವಾಮಿಯೇ ಬಂದು ಬಿಜೆಪಿಗೆ ಬಾ ನಾವೆಲ್ಲ ಒಂದಾಗೋಣ ಎಂದು  ಹೇಳಿರುವುದಾಗಿ ಸ್ವತಃ ಶ್ರೀನಿವಾಸ್ ಅವರೇ ಹೇಳಿದ್ದಾರೆ.

ಗೊಲ್ಲ ಸಮುದಾಯದ ನಾಯಕನಾಗಿರುವ ಬೆಟ್ಟಸ್ವಾಮಿ ಕಳೆದ ಬಾರಿ ಗುಬ್ಬಿಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದಾರೆ. ಸತತ ಮೂರು ಬಾರಿ ಸೋತ ಬೆಟ್ಟಸ್ವಾಮಿಗೆ ಈ ಬಾರಿ ಟಿಕೆಟ್ ಸಿಗುವ ಸಾಧ್ಯತೆ ಇಲ್ಲ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com